ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟ ಸರಕಾರದಿಂದ ಭ್ರಷ್ಟರಿಗೆ ರಕ್ಷಣೆ: ದೊರೆಸ್ವಾಮಿ (BJP | Yeddyurappa | Bangalore | Dorai swamy | Karnataka | Lokayuktha)
ಆಡಳಿತಾರೂಢ ಭ್ರಷ್ಟ ರಾಜ್ಯ ಸರಕಾರ ಭ್ರಷ್ಟರನ್ನು ಶಿಕ್ಷಿಸುವ ಬದಲು ಅವರಿಗೆ ರಕ್ಷಣೆ ಕೊಡುತ್ತಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆಗಾಗಿ ಮತ್ತು ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಇಂಡಿಯಾ ಎಗೈನೆಸ್ಟ್ ಕರಪ್ಷನ್ ಸಂಘಟನೆ ನೇತೃತ್ವದಲ್ಲಿ ಶನಿವಾರ ನಡೆದ ರಾಲಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲೋಕಾಯುಕ್ತರು ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಹಿಡಿದರೆ ಅವರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಶಾಸಕ ವೈ.ಸಂಪಂಗಿ ವಿರುದ್ಧವೂ ಸರಕಾರ ಏನೂ ಮಾಡಲಿಲ್ಲ. ಸ್ವತಃ ಭ್ರಷ್ಟವಾಗಿರುವ ಸರಕಾರ ಭ್ರಷ್ಟರಿಗೆ ರಕ್ಷಣೆಗೆ ನೀಡುತ್ತಿದೆ ಎಂದು ಆರೋಪಿಸಿದರು.

ಅಲ್ಲದೇ ಲೋಕಪಾಲ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ದೇಶದಲ್ಲಿ ಎಲ್ಲೆ ಅನ್ಯಾಯ ನಡೆಯಲಿ ಅದನ್ನು ಯುವಕರು ಪ್ರತಿಭಟಿಸಬೇಕು. ಮೇಲ್ವರ್ಗದ ಯುವಕರೂ ಭ್ರಷ್ಟಾಚಾರದ ವಿರುದ್ಧ ಬೀದಿಗಳಿಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಇವನ್ನೂ ಓದಿ