ನನ್ನನ್ನು ಬಗ್ಗಿಸಲು ಯಾರಿಂದಲೂ ಸಾಧ್ಯವಾಗದು: ಯಡ್ಡಿ ಗುಡುಗು
ಬೆಂಗಳೂರು, ಗುರುವಾರ, 14 ಏಪ್ರಿಲ್ 2011( 16:04 IST )
EVENT
ವಿರೋಧ ಪಕ್ಷಗಳು ನನ್ನನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಹರಸಾಹಸ ಪಡುತ್ತಿದ್ದು, ವಿನಾಕಾರಣ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸುತ್ತಿವೆ. ಆದರೆ, ನನ್ನನ್ನು ಬಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ರಾಜ್ಯದ ಬಿಜೆಪಿ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷದಲ್ಲಿ ಇದ್ದ ಅಲ್ಪ ಸ್ವಲ್ಪ ಭಿನ್ನಾಭಿಪ್ರಾಯಗಳನ್ನು ಕೂಡಾ ಬಗೆಹರಿಸಲಾಗಿದೆ ಎಂದು ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷದ ಎಲ್ಲಾ ನಾಯಕರು ಒಂದೇ ಮನೋಭಾವನೆಯಿಂದ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದಲ್ಲಿ ಭಿನ್ನಮತವಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಬಿಜೆಪಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ಧರ್ಮೇಂದ್ರ ಪ್ರಧಾನ್ ರಾಜ್ಯಕ್ಕೆ ಆಗಮಿಸುತ್ತಿರುವುದರಲ್ಲಿ ಯಾವುದೇ ವಿಶೇಷವಿಲ್ಲ. ಸಾಮಾನ್ಯ ಭೇಟಿಯಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷದ ಅಧ್ಯಕ್ಷರಾದ ಈಶ್ವರಪ್ಪ ಸಂಘಟನೆಯಲ್ಲಿ ತೊಡಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆಲ್ಲುವ ಬಗ್ಗೆ ತಂತ್ರ ರಚನೆಯಲ್ಲಿ ತೊಡಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.