ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಪಾಲ ಸಮಿತಿಗೆ ರಾಜೀನಾಮೆ ಬೇಡ: ನ್ಯಾ.ಹೆಗ್ಡೆಗೆ ಯಡಿಯೂರಪ್ಪ (Lokpal | Santosh Hegde | Yadiyurappa | Lokayukta)
ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರು ಲೋಕಪಾಲ ಕಾಯಿದೆ ಕರಡು ರಚನಾ ಸಮಿತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಒತ್ತಾಯಿಸಿದ್ದಾರೆ.

ಅತ್ಯಂತ ಪ್ರಾಮಾಣಿಕ ವ್ಯಕ್ತಿಯಾಗಿರುವ ಹೆಗ್ಡೆ, ದೇಶದಲ್ಲೇ ಪರಿಣಾಮಕಾರಿಯಾಗಿರುವ ರಾಜ್ಯದ ಲೋಕಾಯುಕ್ತ ಕಾಯಿದೆಯನ್ನು ಅನುಷ್ಠಾನಗೊಳಿಸುವ ಮೂಲಕ ಅಕ್ರಮ ಗಣಿಗಾರಿಕೆ ಹಾಗೂ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದರು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಹೈಕಕ್ಕೆ ವಿಶೇಷ ಸ್ಥಾನಮಾನ ನೀಡಿ...
ಹೈದರಾಬಾದ್‌ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರ ಸರಕಾರ ಮೀನ ಮೇಷ ಎಣಿಸುತ್ತಿದೆ ಎಂದು ಆಪಾದಿಸಿರುವ ಯಡಿಯೂರಪ್ಪ, ಸರಕಾರ ಕೂಡಲೇ ವಿಶೇಷ ಸ್ಥಾನಮಾನ ನೀಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇವನ್ನೂ ಓದಿ