ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಿಟ್ಲರ್‌ನಂತೆ ಯಡಿಯೂರಪ್ಪಗೂ ದಾರುಣ ಅಂತ್ಯ: ಖರ್ಗೆ (Congress | Mallikarjuna kharghe | Karnataka crisis | BJP | Yeddyurappa)
PR
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದಾಗಿ ಆರೋಪಿಸಿರುವ ಕೇಂದ್ರ ಸಚಿವ, ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಿಟ್ಲರ್‌ನಂತೆ ಬಿಎಸ್‌ವೈಗೂ ದಾರುಣ ಅಂತ್ಯ ಬರಲಿದೆ ಎಂದು ಕಿಡಿಕಾರಿದರು.

ಗುಲ್ಬರ್ಗಾದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆಡಳಿತಾರೂಢ ಬಿಜೆಪಿ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಲದೇ ಪ್ರಜಾಪ್ರಭುತ್ವದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಆಡಳಿತ ನಡೆಸುತ್ತಿದೆ ಎಂದರು.

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಹಂಸರಾಜ್ ಅವರ ಶಿಫಾರಸಿನ ಕುರಿತು ಪ್ರತಿಕ್ರಿಯಿಸಿದ ಅವರು, ರಾಜ್ಯಪಾಲರು ಕಳುಹಿಸಿರುವ ವರದಿಯಲ್ಲಿನ ಅಂಶಗಳ ಬಗ್ಗೆ ತನಗೇನೂ ಗೊತ್ತಿಲ್ಲ ಎಂದರು. ಈ ಬಗ್ಗೆ ಕೇಂದ್ರ ಸರಕಾರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿನ ನಾಟಕೀಯ ಬೆಳವಣಿಗೆಯಲ್ಲಿ ರಾಜ್ಯಪಾಲರು ಮತ್ತು ಸರಕಾರದ ನಡುವೆ ಜಂಗೀಕುಸ್ತಿ ಮುಂದುವರಿದಿದ್ದು, ಇದೀಗ ಚೆಂಡು ಕೇಂದ್ರದ ಅಂಗಳದಲ್ಲಿದೆ. ಆದರೆ ಏತನ್ಮಧ್ಯೆ ಆಡಳಿತ ಮತ್ತು ಪ್ರತಿಪಕ್ಷಗಳ ಮುಖಂಡರು ಒಬ್ಬರಿಗೊಬ್ಬರು ಕೆಸರೆರಚಾಟದಲ್ಲಿ ತೊಡಗಿದ್ದಾರೆ.
ಇವನ್ನೂ ಓದಿ