ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನೂರು ಗವರ್ನರ್ ಬಂದ್ರೂ ಏನೂ ಮಾಡಕ್ಕಾಗಲ್ಲ: ನಾಯ್ಡು (Venkaiah Naidu | Governor | Karnataka Crisis | BJP | Yeddyurappa)
WD
ಎಚ್.ಆರ್.ಭಾರದ್ವಾಜ್ ಅವರಂತಹ ನೂರು ರಾಜ್ಯಪಾಲರು ಬಂದರೂ ಜನಬೆಂಬಲ ಇರುವ ರಾಜ್ಯದ ಬಿಜೆಪಿ ಸರಕಾರವನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ವೆಂಕಯ್ಯನಾಯ್ಡು ಹೇಳಿದರು.

ಸೋಮವಾರ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಆಡಳಿತ ಚುಕ್ಕಾಣಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಬಹಳ ದಿನಗಳಿಂದಲೂ ರಾಜ್ಯಪಾಲರು ಸುವರ್ಣ ಅವಕಾಶಕ್ಕಾಗಿ ಕಾಯುತ್ತಿದ್ದರು. ಅವರ ಈ ಕ್ರಮದ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕಿಡಿಕಾರಿದರು.

ಜನರ ಬೆಂಬಲ ಸರಕಾರಕ್ಕೆ ಇರುವುದರಿಂದ ಯಾರೂ ಗಾಬರಿಪಡಬೇಕಾಗಿಲ್ಲ. ರಾಜ್ಯಪಾಲರ ಈ ಕ್ರಮದ ವಿರುದ್ಧ ರಾಜ್ಯ ಮತ್ತು ದೇಶಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದರು. ರಾಜ್ಯಪಾಲರು ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
ಇವನ್ನೂ ಓದಿ