ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂಗೆ ದೇವರು ಶಿಕ್ಷೆ ಕೊಡೋ ಕಾಲ ಬಂದಿದೆ: ರೇವಣ್ಣ (BJP | Yeddyurappa | Land scam | Advani | JDS | Revanna)
ಸ್ವಜನಪಕ್ಷಪಾತ, ಭ್ರಷ್ಟಾಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ದೇವರು ಶಿಕ್ಷೆ ಕೊಡುವ ಕಾಲ ದೂರವಿಲ್ಲ. ದೇವರ ತಾಳ್ಮೆಗೂ ಮಿತಿ ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಅವರು ತುಮಕೂರಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರನ್ನು ಭೇಟಿ ಮಾಡುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿಯವರೇ ಸಿಎಂ ಯಡಿಯೂರಪ್ಪನವರ ಭ್ರಷ್ಟಾಚಾರ, ಆಡಳಿತ ವೈಖರಿಯ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಯಡಿಯೂರಪ್ಪನವರಿಗೆ ಶಿಕ್ಷೆಯಾಗುವ ದಿನ ದೂರವಿಲ್ಲ ಎಂದರು.

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಮಕ್ಕಳು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಅಕ್ರಮವಾಗಿ ಸೈಟ್ ಪಡೆದಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸುತ್ತಲೇ ಇದ್ದಾರೆ. ಆದರೆ ತಾವಾಗಲೀ ಅಥವಾ ತಮ್ಮ ಕುಟುಂಬದವರಗಾಲಿ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ. ಎಲ್ಲ ಅಧಿಕಾರವೂ ಅವರ ಬಳಿಯೇ ಇದೆ ಎಂದರು.

ಅದನ್ನು ಬಿಟ್ಟು ಅಧಿಕಾರರೂಢ ಮುಖ್ಯಮಂತ್ರಿಯೊಬ್ಬ ದಾರಿಹೋಕನಂತೆ ಆರೋಪ ಮಾಡುವುದು ಅವರ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಕಿಡಿಕಾರಿದರು.
ಇವನ್ನೂ ಓದಿ