ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಅಧಿಕಾರಕ್ಕೇರಲು ಜೆಡಿಎಸ್‌ ಕಾರಣ: ಹರಿಪ್ರಸಾದ್ (BJP | Congress | B K Hariprasad | H D Kumaraswamy | Santosh Hegde)
PR
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಮಾಜಿ ಪ್ರದಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇರ ಕಾರಣವಾಗಿದ್ದಾರೆ ಎಂದು ಏಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಆರೋಪಿಸಿದ್ದಾರೆ.

'ಕಾಂಗ್ರೆಸ್ ನಡಿಗೆ ಜನರ ಬಳಿಗೆ' ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸಮ್ಮಿಶ್ರ ಸರಕಾರ ರಚಿಸಿರುವುದೇ ಬಿಜೆಪಿ ಏಳಿಗೆಗೆ ಕಾರಣವಾಯಿತು ಎಂದು ಕಿಡಿಕಾರಿದ್ದಾರೆ.

ಇದೀಗ, ಕುಮಾರಸ್ವಾಮಿ ದಿನನಿತ್ಯ ಬಿಜೆಪಿ ಸರಕಾರದ ಹಗರಣಗಳನ್ನು ಬಹಿರಂಗಗೊಳಿಸುತ್ತಿದ್ದಾರೆ. ಆದರೆ, ಬಿಜೆಪಿಯಂತಹ ಭ್ರಷ್ಟ ಸರಕಾರ ಅಧಿಕಾರಕ್ಕೆ ಬರಲು ಯಾರು ಕಾರಣ? ಕುಮಾರಸ್ವಾಮಿ ತಪ್ಪಿನಿಂದಾಗಿ ಇಂತಹ ಭ್ರಷ್ಟ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ ಎನ್ನುವುದನ್ನು ಜೆಡಿಎಸ್ ನಾಯಕರು ಮರೆಯಬಾರದು ಎಂದರು.

ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಅಕ್ರಮ ಗಣಿಗಾರಿಕೆ ವರದಿ ಸಲ್ಲಿಸಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಹರಿಪ್ರಸಾದ್ ಅಸಮಧಾನ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆ ಅಂತಿಮ ವರದಿಯನ್ನು ಬೇಗನೆ ಮಂಡಿಸಲು ಅವರಿಗೆ ಇರುವ ಅಡ್ಡಿ ಆತಂಕಗಳಾದರೂ ಏನು? ವರದಿ ಬಹಿರಂಗವಾದಲ್ಲಿ ಹಲವು ಗಣ್ಯ ನಾಯಕರ ಮುಖವಾಡ ಕಳಚಲಿದೆ ಎಂದು ತಿಳಿಸಿದ್ದಾರೆ.
ಇವನ್ನೂ ಓದಿ