ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವರದಿ ರದ್ದುಪಡಿಸಿ: ಯಡಿಯೂರಪ್ಪ ಹೈಕೋರ್ಟ್ ಮೊರೆ (BJP | Yeddyurappa | Illegal Mining Report | Lokayukta | High court | Hegde)
ಅಕ್ರಮ ಗಣಿ ವರದಿಯಿಂದ ತಲೆದಂಡ ಕೊಟ್ಟ ಬಿ.ಎಸ್.ಯಡಿಯೂರಪ್ಪ ಇದೀಗ ಲೋಕಾಯುಕ್ತರ ವರದಿಯನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅಕ್ರಮ ಗಣಿ ಹಗರಣದ ಕುರಿತು ಲೋಕಾಯುಕ್ತರು ಸಲ್ಲಿಸಿರುವ ಅಂತಿಮ ವರದಿಯನ್ನು ರದ್ದುಪಡಿಸುವಂತೆ ಕೋರಿ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಲೋಕಾಯುಕ್ತರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಅಕ್ರಮ ಗಣಿ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಗಣಿ ಹಗರಣದ ಕುರಿತ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಅಂಶಗಳನ್ನು ಪ್ರಸ್ತಾಪಿಸಿಲ್ಲ. ಅಲ್ಲದೇ ಮುಖ್ಯಮಂತ್ರಿಗಳ ಹೇಳಿಕೆಯನ್ನೂ ಕೂಡ ಪಡೆದುಕೊಂಡಿಲ್ಲ ಎಂದು ಯಡಿಯೂರಪ್ಪ ತಮ್ಮ ರಿಟ್‌ನಲ್ಲಿ ತಿಳಿಸಿದ್ದಾರೆ.

ಆ ನಿಟ್ಟಿನಲ್ಲಿ ಲೋಕಾಯುಕ್ತ ವರದಿ ಅಸಮರ್ಪಕವಾಗಿದ್ದು, ಅದನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ರಿಟ್ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಬುಧವಾರ ನಡೆಯುವ ಸಾಧ್ಯತೆ ಇದೆ. ಟ್ಟಾರೆ ರಾಜ್ಯರಾಜಕಾರಣದ ಜಂಗೀಕುಸ್ತಿ ಮುಂದುವರಿದಿರುವ ನಡುವೆಯೇ ಯಡಿಯೂರಪ್ಪನವರು ಲೋಕಾಯುಕ್ತರ ಅಕ್ರಮ ಗಣಿ ವಿರುದ್ಧ ಕಾನೂನು ಸಮರ ಸಾರಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಅಕ್ರಮ ಗಣಿ ವರದಿ, ಲೋಕಾಯುಕ್ತ, ಹೈಕೋರ್ಟ್, ಸಂತೋಷ್ ಹೆಗ್ಡೆ