ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಾರ ಕೈಗೊಂಬೆಯೂ ಅಲ್ಲ; ಕಾಲವೇ ಉತ್ತರಿಸಲಿದೆ: ಡಿವಿಎಸ್ (Sadananda Gowda | Yaddyurappa | State Politics | Karnataka CM)
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ತಾಳಕ್ಕೆ ತಕ್ಕಂತೆ ಕುಣಿಯಲಿದ್ದಾರೆ ಎಂಬ ಆಪಾದನೆಗೆ ಉತ್ತರ ನೀಡಿರುವ ನೂತನ ಸಿಎಂ ಡಿ. ವಿ. ಸದಾನಂದ ಗೌಡ, ಇವೆಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಾನು ಯಾರ ಕೈಗೊಂಬೆಯು ಅಲ್ಲ. ಯಾವುದೇ ಸಂಘರ್ಷಕ್ಕೆ ಅವಕಾಶ ನೀಡದೆ ಸ್ವತಂತ್ರವಾಗಿ ಕಾರ್ಯನಿರ್ವನಿಸುವ ಮೂಲಕ ರಾಜ್ಯವನ್ನು ಹೊಸ ದಿಕ್ಕಿನತ್ತ ತೆಗೆದುಕೊಂಡು ಹೋಗಲಿದ್ದೇನೆ ಎಂದಿದ್ದಾರೆ.

ಯಡಿಯೂರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ನೂತನ ಮುಖ್ಯಮಂತ್ರಿಯಾಗಿ ಸದಾನಂದ ಗೌಡ ಅವರು ಗುರುವಾರ ಪ್ರಮಾಣಪ್ರಚನ ಮಾಡಿದರು. ಈ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಬಣದ ಗೈರು ಹಾಜರಾಗಿರುವುದು ಹೊಸ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.

ಮುಂದಿನ ಎರಡು ವರ್ಷ ಜನಪರ ಆಡಳಿತ ನೀಡುವುದೇ ನನ್ನ ಗುರಿಯಾಗಿದೆ. ಯಡಿಯೂರಪ್ಪ ಸರ್ಕಾರದ ಜನರಪರ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುವುದರ ಜತೆಗೆ ಮತ್ತಷ್ಟು ಯೋಜನೆಗಳನ್ನು ಜಾರಿ ಮಾಡಲಿದ್ದೇನೆ. ವಿರೋಧ ಪಕ್ಷ ಸಹಿತ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಒಳ್ಳೆಯ ಆಡಳಿತ ನೀಡಲಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು, ಮುಖಂಡರು ಮತ್ತು ಪ್ರತಿಯೊಬ್ಬ ಶಾಸಕರ ಜತೆ ಸಮಾಲೋಚನೆ ನಡೆಸಿ ಸಚಿವ ಸಂಪುಟ ರಚಿಸಲಾಗುವುದು ಎಂದವರು ತಿಳಿಸಿದರು.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಸದಾನಂದ ಗೌಡ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕರ್ನಾಟಕ ಸಿಎಂ, ರಾಜ್ಯ ರಾಜಕೀಯ