ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡ್ಡಿ ನಮ್ಮ ನಾಯಕರು, ಡಿವಿ ರಬ್ಬರ್ ಸ್ಟ್ಯಾಂಪ್ ಅಲ್ಲ: ಅನಂತ್ (BJP | Yeddyurappa | Congress | Sadananda Gowda | Ananth kumar | KPCC)
WD
ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರಬ್ಬರ್ ಸ್ಟ್ಯಾಂಪ್ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್, ಸದಾನಂದ ಗೌಡರು ಸಾಕಷ್ಟು ಅನುಭವಿಗಳಾಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಅವರು ರಬ್ಬರ್ ಸ್ಟ್ಯಾಂಪ್ ಮುಖ್ಯಮಂತ್ರಿಯಲ್ಲ ಎಂದು ಹೇಳಿದರು.

ಸದಾನಂದ ಗೌಡರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುವುದರಲ್ಲಿ ಯಾವುದೇ ಅನುಮಾನ ಇಲ್ಲ. ಅವರು ರಾಜಕೀಯಕ್ಕೆ ಹೊಸಬರು ಅಲ್ಲ. ಆದರೂ ಪ್ರತಿಪಕ್ಷ ಮುಖಂಡರು ಗೌಡರ ಬಗ್ಗೆ ಅನಾವಶ್ಯಕವಾಗಿ ಆರೋಪ ಮಾಡುತ್ತಿದ್ದಾರೆ ಎಂದರು.

ಶನಿವಾರ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಸೌತ್ ಎಂಡ್ ವೃತ್ತದಲ್ಲಿ ಸ್ವೀಡನ್ ಮಾದರಿಯ 50 ಅಡಿ ಎತ್ತರದ ಗಡಿಯಾರ ಗೋಪುರದ ಶಂಕುಸ್ಥಾಪನೆ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ನಾಯಕರು. ಈ ಹಿಂದೆ ಅವರ ನೇತೃತ್ವದಲ್ಲೇ ಬಿಜೆಪಿ ರಾಜ್ಯದಲ್ಲಿ ಸರ್ಕಾರ ಸ್ಥಾಪನೆ ಮಾಡಿದೆ. ಆ ನಿಟ್ಟಿನಲ್ಲಿ ಸದಾನಂದ ಗೌಡರ ಸಂಪುಟದಲ್ಲಿ ಯಡಿಯೂರಪ್ಪ ಅವರ ಪ್ರಭಾವ ಇರುತ್ತದೆ. ಅವರ ಮಾತಿನಂತೆ ಮುಖ್ಯಮಂತ್ರಿಗಳು ನಡೆದುಕೊಳ್ಳುತ್ತಾರೆಂಬ ಪ್ರತಿಪಕ್ಷಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಯಡಿಯೂರಪ್ಪ, ಕಾಂಗ್ರೆಸ್, ಸದಾನಂದ ಗೌಡ, ಅನಂತ್ ಕುಮಾರ್, ಕೆಪಿಸಿಸಿ