ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅಣ್ಣಾ ಹೋರಾಟಕ್ಕೆ ನಮ್ಮ ಬೆಂಬಲವಿದೆ: ದೇವೇಗೌಡ (Deve Gowda | Anna Hazare | Central Govt | Jan Lokpal Bill)
ಭ್ರಷ್ಟಚಾರವನ್ನು ಹತ್ತಿಕ್ಕಲು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ತಿಳಿಸಿದ್ದಾರೆ.

ಈ ಸಂಬಂಧ ಒಂಬತ್ತು ಪ್ರಾದೇಶಿಕ ಪಕ್ಷಗಳ ಜತೆ ಸೇರಿ 23ರಂದು ರಾಷ್ಟ್ರವ್ಯಾಪಿ ಹೋರಾಟ ಕೈಗೊಳ್ಳುವುದಾಗಿ ದೇವೇಗೌಡರು ತಿಳಿಸಿದರು.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ, ಜನ ಲೋಕಪಾಲ ಮಸೂದೆ ಬಗ್ಗೆ ಇನ್ನೂ ಹೆಚ್ಚು ಚರ್ಚಿಸುವ ಅಗತ್ಯವಿದೆ. ಕೇಂದ್ರ ಸರಕಾರ ಅಣ್ಣಾ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು. ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದರು.

ಜನಲೋಕಪಾಲ ವಿಧೇಯಕ ಜಾರಿ ಆಗ್ರಹಿಸಿ ಹಜಾರೆ ಪಟತೊಟ್ಟು ನಿಂತಿದ್ದಾರೆ. ಭ್ರಷ್ಟಚಾರ ವಿರುದ್ಧ ಗಾಂಧಿವಾದಿ ಹಜಾರೆ ನಡೆಸುತ್ತಿರುವ ಹೊರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.

ಇದೇ ಸಂದರ್ಭದಲ್ಲಿ ಲೋಕಪಾಲ ಮಸೂದೆ ಮಂಡನೆಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂದು ಪ್ರಧಾನಿಯವರಿಗೆ ಮನವಿ ಮಾಡಿದರು.

ವೆಬ್‌ದುನಿಯಾ ಓದುಗರೇ! ಕಾಮೆಂಟ್ ಮಾಡೋ ಮುನ್ನ ಇಲ್ಲೊಮ್ಮೆ ಓದಿ ನೋಡಿ!
ಇವನ್ನೂ ಓದಿ
ಇದನ್ನು ಸಹ ಶೋಧಿಸು: ದೇವೇಗೌಡ, ಅಣ್ಣಾ ಹಜಾರೆ, ಕೇಂದ್ರ ಸರಕಾರ, ಜನಲೋಕಪಾಲ ಮಸೂದೆ