ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾನು ಬಿಎಸ್‌ವೈ ಕೈಗೊಂಬೆ ಅಲ್ಲ: ಸದಾನಂದ ಗೌಡ (DV Sadanada Gowda | Yeddyurappa | Lokayukta report | Congress | JDS)
PTI
ನಾನು ಯಾರ ಕೈಗೊಂಬೆಯಾಗಿ ಕೆಲಸ ಮಾಡುವುದಿಲ್ಲ. ರಾಜ್ಯದ ಆರು ಕೋಟಿ ಜನರ ಕೈಗೊಂಬೆಯಾಗಿ ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿ, ವಿಶೇಷ ವರದಿ-ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ತಾವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆಯಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಕಾರ್ಯಾಚರಣೆ ಮೂಲಕ ನಾನು ಏನು ಎಂಬುದನ್ನು ಸಾಧಿಸಿ ತೋರಿಸುತ್ತೇನೆ ಎಂದರು.

ಮುಂದಿನ 22 ತಿಂಗಳ ಕಾಲ ಸಮರ್ಥವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದ ಗೌಡರು, (2013 ಮೇ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ) ಅಲ್ಲದೇ ಮುಂದಿನ ಐದು ವರ್ಷಗಳ ಕಾಲವೂ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುವ ಇಚ್ಛೆ ಹೊಂದಿರುವುದಾಗಿ ಹೇಳಿದರು.

ಬುಧವಾರ ಮಾಧ್ಯಮದವರ ಜತೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ಮಾಜಿ ಮುಖ್ಯಮಂತ್ರಿಗಳು. ಅವರ ಸಹಲೆ, ಸೂಚನೆಗಳನ್ನು ತೆಗೆದುಕೊಂಡು ಅಂತಿಮ ನಿರ್ಧಾರವನ್ನು ನಾನೇ ಮಾಡುತ್ತೇನೆ. ಯಾವುದೇ ಒತ್ತಡಗಳಿಗೆ ಮಣಿಯುವುದಿಲ್ಲ ಎಂದು ಹೇಳಿದರು.

ತಾನು ಮುಖ್ಯಮಂತ್ರಿ ಗದ್ದುಗೆ ಏರಿದ ದಿನದಿಂದ ನನ್ನದೇ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇನೆ ಎಂದ ಅವರು, ಮಾಜಿ ಮುಖ್ಯಮಂತ್ರಿಗಳಿಗೆ ಕೊಡಬೇಕಾದಂತಹ ಭದ್ರತೆಯನ್ನು ಒದಗಿಸಿದ್ದೇವೆಯೇ ವಿನಃ ಶಿಷ್ಟಾಚಾರ ಮೀರಿ ಯಾವುದೇ ಸೌಕರ್ಯ ಕಲ್ಪಿಸಿಲ್ಲ ಎಂದು ತಿಳಿಸಿದರು.

ಅಲ್ಲದೇ ಮಂತ್ರಿಗಳ ಕಾರ್ಯನಿವರ್ಹಣೆಯಲ್ಲಿ ತಾವು ಅನಗತ್ಯವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಯಾವುದೇ ಕಾರ್ಯಕ್ರಮಗಳನ್ನು ಮಂತ್ರಿಗಳು ರೂಪಿಸಿದರೆ ಅದನ್ನು ತಮ್ಮ ಗಮನಕ್ಕೆ ಕಡ್ಡಾಯವಾಗಿ ತರಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಲಾಗುವುದು ಎಂದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಬಿಜೆಪಿ, ಸದಾನಂದ ಗೌಡ, ಯಡಿಯೂರಪ್ಪ, ಕಾಂಗ್ರೆಸ್, ಜೆಡಿಎಸ್, ಚುನಾವಣೆ, ಲೋಕಾಯುಕ್ತ ವರದಿ