ಗುಲ್ಬರ್ಗಾ, ಭಾನುವಾರ, 18 ಸೆಪ್ಟೆಂಬರ್ 2011( 09:42 IST )
ಗಣಿಧಣಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧನ ಹಾಗೂ ರೆಡ್ಡಿ ಸಹೋದರರ ವಿಚಾರಣೆಯಿಂದ ಬಿಜೆಪಿ ವರ್ಚಸ್ಸಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗಿಲ್ಲ ಎಂದು ಮುಖ್ಯಮಂತ್ರಿ ಸದಾನಂದ ಗೌಡ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೆಡ್ಡಿ ಸಹೋದರರ ಮೇಲಿನ ಆರೋಪ ಹೊಸದೇನಲ್ಲ. ಮೊದಲಿನಿಂದಲೂ ಅವರ ಮೇಲೆ ಆರೋಪ ಕೇಳಿಬರುತ್ತಿದೆ. ಇದರಿಂದಾಗಿ ರಾಜ್ಯ ಬಿಜೆಪಿಗೆ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಜನಾರ್ದನ ರೆಡ್ಡಿಯವರ ವಿಚಾರಣೆ ನಡೆಯುತ್ತಿದೆ. ಅವರು ಆರೋಪಿಯಷ್ಟೇ, ಆದರೆ ಅಪರಾಧಿಯಲ್ಲ ಎಂದು ಈ ಸಂದರ್ಭದಲ್ಲಿ ಸಮರ್ಥಿಸಿಕೊಂಡರು.
ಗುಲ್ಬರ್ಗಾದಲ್ಲಿ ನಡೆದ ವಿಮೋಚನಾ ದಿನದ ಸಂಭ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜಕೀಯ ಪ್ರೇರಿತವಾಗಿ ಸಿಬಿಐ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಲೋಕಾಯುಕ್ತ ವರದಿಯಲ್ಲಿ ಹೆಸರಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.