ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಪ್ರಿಯತಮೆ ಜತೆ ಸಲ್ಲಾಪ; ಆಕ್ಷೇಪಿಸಿದ ಪೊಲೀಸ್‌ ಮೇಲೆ ಹಲ್ಲೆ (Hassan | Police | Sravana belagola | Attack | Lover | Karnataka News | Bangalore News,)
ಯುವತಿಯೊಂದಿಗೆ ಸಲ್ಲಾಪದಲ್ಲಿ ತೊಡಗಿದ್ದ ಯುವಕನೊಬ್ಬನ ವರ್ತನೆಯನ್ನು ಆಕ್ಷೇಪಿಸಿದ್ದಕ್ಕೆ ಸಿಟ್ಟುಗೊಂಡ ಆತ ಪೊಲೀಸ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದ. ಇದರಿಂದ ಕೆರಳಿದ ಗ್ರಾಮಸ್ಥರು ಯುವಕನನ್ನು ಥಳಿಸಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ಬೆಟ್ಟದಲ್ಲಿ ಶುಕ್ರವಾರ ನಡೆದಿದೆ.

ಬೆಂಗಳೂರಿನ ಜಯನಗರದ ವಾಸಿ ಹೇಮಂತ್ ರಾಜ್ ಪುತ್ರ ಮಧುರಾಜ್ (23) ಥಳಿತಕ್ಕೆ ಒಳಗಾಗಿ ತೀವ್ರ ಪೆಟ್ಟು ಬಿದ್ದಿದೆ. ಆತನನ್ನು ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಹಲ್ಲೆಗೆ ಒಳಗಾದ ಪೊಲೀಸ್ ಪೇದೆ ನಾಗರಾಜು ಅವರನ್ನು ಸಹ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧುರಾಜ್ ಬೆಂಗಳೂರಿನ ಜಯನಗರದಲ್ಲಿ ಆದಿಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಬಿಬಿಎಂ ವಿದ್ಯಾರ್ಥಿಯಾಗಿದ್ದಾನೆ. ಶ್ರವಣಬೆಳಗೊಳದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದ. ಗುರುವಾರ ಊರಿಗೆ ಬಂದಿದ್ದ ಮಧುರಾಜ್, ಪ್ರೇಯಸಿ ಜೊತೆ ವಿಂಧ್ಯಗಿರಿಯ ಕಲ್ಲು ಬಂಡೆಗಳ ಮರೆಯಲ್ಲಿ ಕುಳಿತು ಸರಸ-ಸಲ್ಲಾಪದಲ್ಲಿ ತೊಡಗಿದ್ದ. ಇದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು.

ಗಸ್ತಿನಲ್ಲಿದ್ದ ಶ್ರವಣಬೆಳಗೊಳ ಠಾಣೆಯ ನಾಗರಾಜ್, ಈ ತಾಣದಲ್ಲಿ ಹೀಗೆಲ್ಲಾ ಮಾಡಬಾರದು ಹೊರಡಿ ಎಂದು ತಾಕೀತು ಮಾಡಿದರು. ಇದರಿಂದ ಕುಪಿತಗೊಂಡ ಮಧುರಾಜ್, ಕಲ್ಲಿನಿಂದ ಪೇದೆ ನಾಗರಾಜ್ ತಲೆಗೆ ಹೊಡೆದು ತೀವ್ರ ಗಾಯಗೊಳಿಸಿದ್ದಾನೆ. ನಾಗರಾಜ್ ಪ್ರಜ್ಞೆ ಕಳೆದುಕೊಂಡರು. ಅಲ್ಲೇ ಇದ್ದ ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪವಿತ್ರ ಸ್ಥಳದಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದಲ್ಲದೆ ಆಕ್ಷೇಪಿಸಿದವರ ಮೇಲೆ ಹಲ್ಲೆ ಮಾಡಿದ್ದರಿಂದ ಕೋಪಗೊಂಡ ನಾಗರಿಕರು ಮಧುರಾಜ್‌ಗೆ ಥಳಿಸಿದ್ದಾರೆ.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ಪೊಲೀಸ್, ಹಾಸನ, ಶ್ರವಣಬೆಳಗೊಳ, ಹಲ್ಲೆ, ಪ್ರಿಯತಮೆ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ರಾಷ್ಟ್ರೀಯ ಸುದ್ದಿ, ಬ್ರೇಕಿಂಗ್ ನ್ಯೂಸ್, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಭಾರತೀಯ ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್