ರಾಷ್ಟ್ರೀಯ | ಅಂತಾರಾಷ್ಟ್ರೀಯ | ಕರ್ನಾಟಕ ಸುದ್ದಿ | ಪ್ರಚಲಿತ | ವಿಮಾನ ದುರಂತ | ಅನಿವಾಸಿ ಕನ್ನಡಿಗ | ಓದುಗರ ಅಭಿಮತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಕರ್ನಾಟಕ ಸುದ್ದಿ » ಇದು ಹಣ ಬಲದ ಜಯ-ನಮ್ಮ ತಾಕತ್ತು ತೋರಿಸ್ತೇವೆ: ರೇವಣ್ಣ (Revanna | Koppal by poll Result 2011| JDS | Koppal by election | BJP Wins Koppal | Karnataka News |)
Revanna
PR
ಬಿಜೆಪಿ ಪಕ್ಷದವರು ಹಣಬಲ, ತೋಳ್ಬಲ, ಅಧಿಕಾರ ದುರುಪಯೋಗದಿಂದ ಕೊಪ್ಪಳ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆಂದು ಜೆಡಿಎಲ್‌ಪಿ ಮುಖಂಡ ಎಚ್.ಡಿ.ರೇವಣ್ಣ ಆರೋಪಿಸಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಅಧಿಕಾರದಲ್ಲಿರುವಾಗ ಆಡಳಿತಾರೂಢ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸುವುದು ಸರ್ವೇ ಸಾಮಾನ್ಯ. ಆದರೂ ಸಹ ಸರ್ಕಾರದ ಹಲವು ಸಚಿವರು ಕಳೆದ ಎರಡು ತಿಂಗಳಿನಿಂದ ಕೊಪ್ಪಳದಲ್ಲಿ ಬಿಡಾರ ಹೂಡಿ ಹಣದ ಹೊಳೆ ಹರಿಸಿ, ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದಾರೆ ಎಂದು ಲೇವಡಿ ಮಾಡಿದರು.

ಜಾತ್ಯತೀತ ಪಕ್ಷಗಳು ಈ ಚುನಾವಣೆಯ ಫಲಿತಾಂಶದಿಂದ ಪಾಠ ಕಲಿತು ಮುಂದಾದರೂ ಒಗ್ಗೂಡಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ಸೂಕ್ತ ಎಂದು ಕಿವಿಮಾತು ಹೇಳಿದರು.

ಕೊಪ್ಪಳ ಚುನಾವಣೆ ಫಲಿತಾಂಶ, ಫಲಿತಾಂಶ ಅಲ್ಲ, ಇದು ಸಾಧನೆಯೂ ಅಲ್ಲ. ನಾವು ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಬಲ ತೋರಿಸುತ್ತೇವೆ ಎಂದು ರೇವಣ್ಣ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.
ಇವನ್ನೂ ಓದಿ
ಇದನ್ನು ಸಹ ಶೋಧಿಸು: ರೇವಣ್ಣ, ಜೆಡಿಎಸ್, ಕೊಪ್ಪಳ ಉಪ ಚುನಾವಣೆ 2011, ಕೊಪ್ಪಳ, ಕರಡಿ ಸಂಗಣ್ಣ, ಬಿಜೆಪಿ, ಕನ್ನಡ ಸುದ್ದಿ, ಕರ್ನಾಟಕ ಸುದ್ದಿ, ತಾಜಾ ಕನ್ನಡ ಸುದ್ದಿ, ರಾಜಕೀಯ, ಬೆಂಗಳೂರು ಸುದ್ದಿ, ಕರ್ನಾಟಕ ರಾಜಕೀಯ, ಕನ್ನಡ ಆನ್ಲೈನ್ ನ್ಯೂಸ್