ತಿರುವನಂತಪುರ (ಜು.23): ವರದಕ್ಷಿಣೆ ಪಡೆಯುವ ಹಾಗೂ ವರದಕ್ಷಿಣೆಗಾಗಿ ಕಿರುಕುಳ ನೀಡುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜು ಸೇರುವ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆ ಪಡೆಯಲ್ಲ, ವರದಕ್ಷಿಣೆ ಕೊಡಲ್ಲ’ ಎಂಬ ಬಾಂಡ್ ಅನ್ನು ಕೇರಳ ಸರ್ಕಾರ ಕಡ್ಡಾಯಗೊಳಿಸುವ ಸಾಧ್ಯತೆ ಇದೆ.