ಬೆಂಗಳೂರು : ಗಣೇಶನನ್ನು ವಿಘ್ನನಿವಾರಕನೆಂದು ಕರೆಯುತ್ತಾರೆ. ಇಂತಹ ವಿಘ್ನನಿವಾರಕನ ಆರಾಧನೆಗೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿಪಡಿಸಲಾಗಿದ್ದು ಆ ದಿನಕ್ಕೆ ಸಂಕಷ್ಟ ಹರ ಚತುರ್ಥಿ ಎನ್ನುತ್ತಾರೆ. ಪ್ರತಿ ತಿಂಗಳ ಕೃಷ್ಣಪಕ್ಷದ 4 ನೆಯ ದಿನವನ್ನು(ಚತುರ್ಥಿ)ಯನ್ನು ಸಂಕಷ್ಟಹರ ಚತುರ್ಥಿ ಎಂದು ಆಚರಿಸಲಾಗುತ್ತದೆ. ಸಂಕಷ್ಟ ಹರ ಚತುರ್ಥಿಯ ಮತ್ತೊಂದು ವಿಶೇಷವೇನೆಂದರೆ ಮಂಗಳವಾರದಂದು ಸಂಕಷ್ಟ ಚತುರ್ಥಿ ಬಂದರೆ ಆ ವ್ರತಕ್ಕೆ ಮತ್ತಷ್ಟು ಹೆಚ್ಚಿನ ಮಹತ್ವವಿದ್ದು, ಅದನ್ನು ಅಂಗಾರಕ (ಮಂಗಳ) ಚತುರ್ಥಿ ಎಂಬ ಹೆಸರಿನಲ್ಲಿ