ಬೆಂಗಳೂರು : ಗಣೇಶನನ್ನು ವಿಘ್ನನಿವಾರಕನೆಂದು ಕರೆಯುತ್ತಾರೆ. ಇಂತಹ ವಿಘ್ನನಿವಾರಕನ ಆರಾಧನೆಗೆಗಾಗಿಯೇ ಪ್ರತಿ ತಿಂಗಳಲ್ಲಿ ಒಂದು ದಿನವನ್ನು ವಿಶೇಷವಾಗಿ ನಿಗದಿಪಡಿಸಲಾಗಿದ್ದು ಆ ದಿನಕ್ಕೆ ಸಂಕಷ್ಟ ಹರ ಚತುರ್ಥಿ ಎನ್ನುತ್ತಾರೆ. ಪ್ರತಿ ತಿಂಗಳ ಕೃಷ್ಣಪಕ್ಷದ 4 ನೆಯ ದಿನವನ್ನು(ಚತುರ್ಥಿ)ಯನ್ನು ಸಂಕಷ್ಟಹರ ಚತುರ್ಥಿ ಎಂದು ಆಚರಿಸಲಾಗುತ್ತದೆ.