ಬೆಂಗಳೂರು : ಕೆಲವರು ತುಂಬಾ ಕಷ್ಟಪಟ್ಟು ಮನೆ ನಿರ್ಮಾಣ ಮಾಡುತ್ತಾರೆ. ಅಂತವರು ಮೊದಲು ಜಾಗ ಆಯ್ಕೆ ಮಾಡುವಾಗ ವಾಸ್ತು ಶಾಸ್ತ್ರದ ಪ್ರಕಾರ ಆಯ್ಕೆ ಮಾಡಿದರೆ ಉತ್ತಮ. ಯಾಕೆಂದರೆ ಕೆಲವೊಂದು ಕಡೆ ಮನೆ ನಿರ್ಮಾಣ ಮಾಡಿದರೆ ಆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಶಾಂತ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಿ ಶಾಂತವಾಗಿರಲು ಜನರು ಇಷ್ಟಪಡ್ತಾರೆ. ಆದ್ರೆ ವಾಸ್ತು ಶಾಸ್ತ್ರದ ಪ್ರಕಾರ, ಶಾಂತವಾಗಿರುವ ನದಿ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಬಾರದು.