ಬೆಂಗಳೂರು : ಆಷಾಢ ಮಾಸದಲ್ಲಿ ಕೆಲವರು ಉಪವಾಸ, ವ್ರತಗಳನ್ನು ಮಾಡುತ್ತಾರೆ. ಕಾರಣ ಭೂಮಿಯ ಮೇಲೆ ಅಸುರೀ ಶಕ್ತಿಗಳ ಪ್ರಾಬಲ್ಯವು ಹೆಚ್ಚಾಗುತ್ತದೆ. ಇದರ ಪರಿಣಾಮವು ಭೂಮಿಯ ಮೇಲಿನ ಸಜೀವ ಸೃಷ್ಟಿಯ ಮೇಲೂ ಆಗುತ್ತದೆ. ಈ ಮಾಸದ ಏಕಾದಶಿಯಂದು ಉಪವಾಸ, ಪೂಜಾವಿಧಿ, ವ್ರತ ಮುಂತಾದವುಗಳನ್ನು ಮಾಡುವುದರಿಂದ ಜೀವದ ಮೇಲಾಗುವ ಕೆಟ್ಟ ಶಕ್ತಿಗಳ ಆಕ್ರಮಣಗಳ ಪ್ರಮಾಣವು ಕಡಿಮೆಯಾಗುತ್ತದೆ. ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ದೇವಶಯನಿ (ದೇವರ ನಿದ್ರೆಯ) ಏಕಾದಶಿ ಎನ್ನುತ್ತಾರೆ ಮತ್ತು ಕೃಷ್ಣ