ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಮುಂದುವರಿಯಲಿದೆ. ಆದರೆ ದೇವತಾ ಕಾರ್ಯಕ್ರಮಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು. ಕೌಟುಂಬಿಕವಾಗಿ ಬಂಧುಮಿತ್ರರ ಭೇಟಿಯಾಗುವಿರಿ. ಖರ್ಚುವೆಚ್ಚಗಳ ಬಗ್ಗೆ ಮಿತಿಯಿರಲಿ.ವೃಷಭ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವ ಸಾಧ್ಯತೆಯಿದೆ. ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗಬಹುದು. ವ್ಯವಹಾರ ಕ್ಷೇತ್ರದಲ್ಲಿ ವಂಚನೆಗೊಳಗಾದಂತೆ ಎಚ್ಚರವಹಿಸಿ.ಮಿಥುನ: ಸಾಧು ಸಂತರ ಭೇಟಿಯಾಗುವಿರಿ. ಪೂರ್ವ ದಿಕ್ಕಿನ ಪ್ರಯಾಣ ಶುಭವುಂಟುಮಾಡುವುದು. ಕಳೆದು ಹೋದ