ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಕಾರ್ಯಬಾಹುಳ್ಯದಿಂದಾಗಿ ದೇಹಾಯಾಸವಾದೀತು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಕಂಡುಬಂದೀತು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ನಿಮ್ಮ ಮನಸ್ಸಿನಲ್ಲಿ ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಪಡೆದುಕೊಳ್ಳಲಿದ್ದೀರಿ. ವ್ಯಾಪಾರ,ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಅವಸರದ ನಿರ್ಧಾರ ಬೇಡ.ಮಿಥುನ: ಕೋಪದ ಕೈಗೆ ಬುದ್ಧಿಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ.