ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಯಾರದ್ದೋ ತಪ್ಪಿಗೆ ನೀವು ದಂಡ ತೆರುವ ಅನಿವಾರ್ಯತೆ ಎದುರಾದೀತು. ಎಚ್ಚರಿಕೆಯಿಂದ ವ್ಯವಹರಿಸಿದರೆ ಉತ್ತಮ. ಸರ್ಕಾರಿ ಕೆಲಸಗಳಿಗಾಗಿ ಓಡಾಟ ನಡಸಲಿದ್ದೀರಿ. ವ್ಯಾಪಾರಿಗಳಿಗೆ ಚೇತರಿಕೆಯ ವಾತಾವರಣ ಕಂಡುಬರಲಿದೆ.ವೃಷಭ: ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯದ ದೃಷ್ಟಿಯಿಂದ ಯೋಜನೆ ಹಾಕಿಕೊಳ್ಳಲಿದ್ದೀರಿ. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬಂದೀತು. ತಾಳ್ಮೆಯಿರಲಿ.ಮಿಥುನ: ದುಡುಕಿನಿಂದ ನಿರ್ಧಾರ ಕೈಗೊಂಡು ತೊಂದರೆಗೆ ಸಿಲುಕಿಕೊಳ್ಳುವ