ಬೆಂಗಳೂರು : ಕಿನ್ನರಿ ಧಾರಾವಾಹಿಯ ನಟ ಕಿರಣ್ ರಾಜ್ ಅವರು ಮಾಡೆಲ್ ಒಬ್ಬರಿಗೆ ವಂಚಿಸಿ ಹಾಗೂ ಹಲ್ಲೆ ಮಾಡಿದ ಕಾರಣ ಈಗಾಗಲೇ ಜೈಲು ಸೇರಿದ್ದು, ಇದೀಗ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಮುಂಬೈ ಮೂಲದ ಮಾಡೆಲ್ ಒಬ್ಬರು ಕಿರಣ್ ರಾಜ್ ತನ್ನ ಜೊತೆ ದೈಹಿಕ ಸಂಪರ್ಕ ಇಟ್ಟುಕೊಂಡಿದ್ದು, ಈಗ ಮದುವೆಯಾಗುವುದಿಲ್ಲ ಎಂದು ವಂಚನೆ ಮಾಡಿದ್ದಲ್ಲದೆ ತನ್ನ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ ಎಂದು ಆಕೆ ಕಿರಣ್ ವಿರುದ್ಧ ದೂರು ದಾಖಲಿಸಿದ್ದರು.