ನವದೆಹಲಿ : ಮರಣ ಪ್ರಮಾಣಪತ್ರದಲ್ಲಿ ಸಾವಿಗೆ ಕಾರಣ ನೀಡಿಲ್ಲ ಎಂಬ ಕಾರಣ ಮುಂದಿಟ್ಟು ಕೋವಿಡ್ನಿಂದ ಮೃತಪಟ್ಟವರಿಗೆ ₹50 ಸಾವಿರ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್ಡಿಎಂಎ) ಶಿಫಾರಸು ಮಾಡಿದಂತೆ ಕೋವಿಡ್ನಿಂದ ಮೃತಪಟ್ಟವರಿಗೆ ₹50 ಸಾವಿರ ಎಕ್ಸ್ಗ್ರೇಷಿಯಾ ಪರಿಹಾರ ನೀಡಬೇಕು. ಕೋವಿಡ್ನಿಂದ ಸಾವು ಸಂಭವಿಸಿದೆ ಎಂದು ಸೂಚಿಸಿ ಪ್ರಮಾಣಪತ್ರ ಸಲ್ಲಿಸಿದ 30 ದಿನಗಳ ಒಳಗೆ ರಾಜ್ಯ