ನವದೆಹಲಿ(ಆ.12): ಕೋವಿಡ್ 2ನೇ ವೇಳೆ ಆಮ್ಲಜನಕದ ಕೊರತೆಯಿಂದ ಆಂಧ್ರಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೊದಲ ಬಾರಿಗೆ ಸಂಸತ್ತಿನಲ್ಲಿ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿ ಆಮ್ಲಜನಕ ಕೊರತೆಯಿಂದ ಸಾವಾಗಿದೆ ಎಂಬುದನ್ನು ಕೇಂದ್ರ ಒಪ್ಪಿಕೊಂಡಿದೆ. ‘ಕೋವಿಡ್ 2ನೇ ಅಲೆಯ ವೇಳೆಯಲ್ಲಿ ಆಂಧ್ರಪ್ರದೇಶದಲ್ಲಿ ಜೀವ ರಕ್ಷಕಾ ವ್ಯವಸ್ಥೆಯಲ್ಲಿದ್ದ ಕೆಲವು ಸೋಂಕಿತರು ಆಮ್ಲಜನಕದ ಕೊರತ್ಥೆ ಇಂದ ಸಾವಿಗೀಡಾಗಿದ್ದಾರೆ. ಆಸ್ಪತ್ರೆಗೆ ಆಮ್ಲಜನಕ ತಲುಪುದು ತಡವಾದ್ದರಿಂದ ಮೇ 10ರಂದು ಕೆಲವರು ಮರಣಹೊಂದಿದ್ದಾರೆ.