ನವದೆಹಲಿ(ಆ.12): ಕೋವಿಡ್ 2ನೇ ವೇಳೆ ಆಮ್ಲಜನಕದ ಕೊರತೆಯಿಂದ ಆಂಧ್ರಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮೊದಲ ಬಾರಿಗೆ ಸಂಸತ್ತಿನಲ್ಲಿ ಹೇಳಿದೆ. ಈ ಮೂಲಕ ಇದೇ ಮೊದಲ ಬಾರಿ ಆಮ್ಲಜನಕ ಕೊರತೆಯಿಂದ ಸಾವಾಗಿದೆ ಎಂಬುದನ್ನು ಕೇಂದ್ರ ಒಪ್ಪಿಕೊಂಡಿದೆ.