ಹೈದರಾಬಾದ್: ಆಸ್ಟ್ರೇಲಿಯಾ ವಿರುದ್ಧ ಇಂದು ನಿರ್ಣಾಯಕ ಟಿ20 ಪಂದ್ಯ ಆಡಲಿಳಿಯಲಿರುವ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.ಭಾರತಕ್ಕೆ ಎಲ್ಲಕ್ಕಿಂತ ದೊಡ್ಡ ತಲೆನೋವಾಗಿರುವುದು ಬೌಲಿಂಗ್. ಅಕ್ಸರ್ ಪಟೇಲ್ ಒಬ್ಬರೇ ಕಳೆದ ಎರಡೂ ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರಿದ್ದರು. ಜಸ್ಪ್ರೀತ್ ಬುಮ್ರಾ ಕಳೆದ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದರು. ಈ ಪಂದ್ಯದಲ್ಲೂ ಅವರು ಆಡುವ ನಿರೀಕ್ಷೆಯಿದೆ. ಹೀಗಾಗಿ ಭುವನೇಶ್ವರ್ ಕುಮಾರ್ ಹೊರಗುಳಿಯುವ ಸಾಧ್ಯತೆಯಿದೆ. ಹರ್ಷಲ್ ಪಟೇಲ್ ಇನ್ನೂ ಲಯಕ್ಕೆ ಬಂದಿಲ್ಲ. ಯಜುವೇಂದ್ರ ಚಾಹಲ್