ದಿ ಓವಲ್: ಒಂದು ಕಡೆ ಟೀಂ ಇಂಡಿಯಾದ ಘಟಾನುಘಟಿ ಬ್ಯಾಟ್ಸ್ ಮನ್ ಗಳೆಲ್ಲಾ ಪೆವಿಲಿಯನ್ ಸೇರಿಯಾಗಿತ್ತು. ಇನ್ನೊಂದು ಕಡೆ ರನ್ ಗಳಿಸಬೇಕಾದ ಒತ್ತಡವಿತ್ತು. ಹೀಗಿರುವಾಗ ಚೊಚ್ಚಲ ಪಂದ್ಯವಾಡಲು ಮೈದಾನಕ್ಕಿಳಿದ ಹನುಮ ವಿಹಾರಿ ಕೆಚ್ಚೆದೆಯಿಂದ ಆಡಿ ಅರ್ಧಶತಕ ಗಳಿಸಿಯೇ ಬಿಟ್ಟರು.