ನಾಗ್ಪುರ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಟಿ20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ನಾಳೆ ನಾಗ್ಪುರದಲ್ಲಿ ನಡೆಯಲಿದೆ.ಈಗಾಗಲೇ ಎರಡೂ ತಂಡಗಳೂ ಸರಣಿಯಲ್ಲಿ ತಲಾ 1 ಗೆಲುವಿನೊಂದಿಗೆ ಸಮಬಲ ಸಾಧಿಸಿರುವುದರಿಂದ ನಾಳೆಯ ಪಂದ್ಯಕ್ಕೆ ಫೈನಲ್ ಕಳೆ ಬಂದಿದೆ. ಆದರೆ ಇದರ ನಡುವೆ ಮಹಾರಾಷ್ಟ್ರದಲ್ಲಿ ಮಳೆಯ ಭೀತಿಯೂ ಇರುವುದರಿಂದ ನಾಳೆಯ ಪಂದ್ಯಕ್ಕೆ ವರುಣ ಅಡ್ಡಿಯಾಗದಿದ್ದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ.ಈ ಪಂದ್ಯಕ್ಕೆ ಟೀಂ ಇಂಡಿಯಾ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.