ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಆರಂಭಿಕ ಆಘಾತ ಅನುಭವಿಸಿರುವ ಟೀಂ ಇಂಡಿಯಾ ನಿಧಾನಗತಿಯ ಬ್ಯಾಟಿಂಗ್ ನಡೆಸಿದೆ. ಊಟದ ವಿರಾಮದ ವೇಳೆಗೆ 2 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿದೆ.ಪೃಥ್ವಿ ಶಾ ದ್ವಿತೀಯ ಬಾಲ್ ಗೇ ಔಟಾದರು. ಹೀಗಾಗಿ ಭಾರತ ರನ್ ಗಳಿಸುವ ಮೊದಲೇ ವಿಕೆಟ್ ಕಳೆದುಕೊಂಡಿತು. ಬಳಿಕ ಚೇತೇಶ್ವರ ಪೂಜಾರ ಮತ್ತು ಮಯಾಂಕ್ ಅಗರ್ವಾಲ್ ನಿಧಾನಗತಿಯ ಆಟವಾಡಿ ವಿಕೆಟ್ ಕಾಯ್ದುಕೊಂಡರು.