ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ತಮಿಳುನಾಡು ವಿರುದ್ಧ 60 ರನ್ ಗಳ ಗೆಲುವು ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.ಮಳೆಯಿಂದಾಗಿ ಆಟ ಪೂರ್ತಿ ನಡೆಯಲಿಲ್ಲ. ಹೀಗಾಗಿ ವಿಜೆಡಿ ನಿಯಮ(ಡಕ್ ವರ್ತ್ ಲೂಯಿಸ್ ನಿಯಮಕ್ಕೆ ಸಮಾನವಾಗಿ ದೇಶೀಯವಾಗಿ ಬಳಸುವ ನಿಯಮ)ದ ಪ್ರಕಾರ ಫಲಿತಾಂಶ ನಿರ್ಧರಿಸಲಾಯಿತು.ಮೊದಲು ಬ್ಯಾಟಿಂಗ್ ಮಾಡಿದ್ದ ತಮಿಳುನಾಡು 49.5 ಓವರ್ ಆಡಿ 252 ರನ್ ಗಳಿಗೆ ಆಲೌಟ್ ಆಗಿತ್ತು.