ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡ ಆಯ್ಕೆಯಾದ ಬೆನ್ನಲ್ಲೇ ರಿಷಬ್ ಪಂತ್ ರನ್ನು ತಂಡದಿಂದ ಹೊರಗಿಟ್ಟು, ದಿನೇಶ್ ಕಾರ್ತಿಕ್ ಗೆ ಮಣೆ ಹಾಕಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.ಈ ನಡುವೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಿದ್ದಕ್ಕೆ ಕಾರಣ ವಿವರಿಸಿದ್ದಾರೆ.ಧೋನಿ ಗಾಯಗೊಂಡರೆ ಮಾತ್ರ ದ್ವಿತೀಯ ವಿಕೆಟ್ ಕೀಪರ್ ಆಡಲಿದ್ದಾರೆ. ಅನುಭವದ ಆಧಾರದಲ್ಲಿ ದಿನೇಶ್ ಕಾರ್ತಿಕ್ ರನ್ನು ಆಯ್ಕೆ ಮಾಡಲಾಗಿದೆ.