ಲಂಡನ್: ಇಂಗ್ಲೆಂಡ್ ವಿರುದ್ಧ ಮೊನ್ನೆಯ ಸೋಲು ಮತ್ತು ಕಳೆದೆರಡು ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳು ರನ್ ಗಳಿಸಲು ಪರದಾಡುತ್ತಿರುವ ಬೆನ್ನಲ್ಲೇ ಇಂದು ಭಾರತ ಬಾಂಗ್ಲಾದೇಶವನ್ನು ಎದುರಿಸುತ್ತಿದೆ.ಇಂದಿನ ಪಂದ್ಯ ಗೆದ್ದರೆ ಭಾರತಕ್ಕೆ ಸೆಮಿಫೈನಲ್ ಸ್ಥಾನ ಗ್ಯಾರಂಟಿಯಾಗಲಿದೆ. ಆದರೆ ಇದಕ್ಕೂ ಮೊದಲು ಭಾರತ ತನ್ನ ಆಡುವ ಬಳಗದಲ್ಲಿ ಮಹತ್ವದ ಬದಲಾವಣೆ ಮಾಡುವ ಸಾಧ್ಯತೆಯಿದೆ.ಆಲ್ ರೌಂಡರ್ ವಿಜಯ್ ಶಂಕರ್ ಗಾಯದ ಕಾರಣದಿಂದ ಹೊರಬಿದ್ದಿರುವುದರಿಂದ ಅನುಭವಿ ದಿನೇಶ್ ಕಾರ್ತಿಕ್ ಆಡುವ ಬಳಗದಲ್ಲಿ ಸ್ಥಾನ