ಬೆಂಗಳೂರು: ಸ್ಪಿನ್ ಮೋಡಿಗಾರ ಅನಿಲ್ ಕುಂಬ್ಳೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಷ್ಟೇ ಹೆಸರು ಮಾಡಿದ್ದರೂ ಇಂದಿಗೂ ತಮ್ಮ ಭಾಷೆ, ನೆಲ ಮರೆತಿಲ್ಲ. ಅದನ್ನು ಅವರು ಕವನ ವಾಚನ ಸವಾಲು ಸ್ವೀಕರಿಸುವ ಮೂಲಕ ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿರುವ ಕವನ ವಾಚನ ಅಭಿಯಾನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅನಿಲ್ ಕುಂಬ್ಳೆಗೆ ಕವನ ವಾಚನದ ಸವಾಲೊಡ್ಡಿದ್ದರು. ಅದನ್ನು ಸ್ವೀಕರಿಸಿರುವ ಅಪ್ಪಟ ಕನ್ನಡ ಪ್ರತಿಭೆ ಕುಂಬ್ಳೆ ರಾಷ್ಟ್ರಕವಿ ಕುವೆಂಪು ಅವರ ಎಲ್ಲಾದರೂ ಇರು