ಕಾನ್ಪುರ: ಗ್ರೀನ್ ಪಾರ್ಕ್ ಮೈದಾನದಲ್ಲಿ ಭಾರತ ಮತ್ತೊಮ್ಮೆ ಗೆಲುವಿನ ಬಾಯಿಯವರೆಗೆ ಬಂದು ಸೋಲುತ್ತದೆ ಎಂದೇ ಎಲ್ಲರೂ ಲೆಕ್ಕಾಚಾರ ಹಾಕಿದ್ದರು.ಆದರೆ ಕೊನೆ ಗಳಿಗೆಯಲ್ಲಿ ಬಿಗು ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಭಾರತಕ್ಕೆ ಗೆಲುವು ದಾಖಲಿಸಿಕೊಟ್ಟರು.