ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಟೆಸ್ಟ್ ಆರಂಭಿಕ ಮಯಾಂಕ್ ಅಗರ್ವಾಲ್ ತಾವು ಭಾರತ ತಂಡಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಹೇಳಿದ ಮಾತೊಂದು ತನ್ನ ವೃತ್ತಿ ಜೀವನದಲ್ಲಿ ಯಾವ ರೀತಿ ಬದಲಾವಣೆ ತಂದಿತು ಎಂಬುದನ್ನು ಹೇಳಿಕೊಂಡಿದ್ದಾರೆ. ಮಯಾಂಕ್ ಅಗರ್ವಾಲ್ 2017 ರಲ್ಲಿ ರಣಜಿ ಟ್ರೋಫಿಯಲ್ಲಿ ಸಾಕಷ್ಟು ರನ್ ಗಳಿಸಿಯೂ ಟೀಂ ಇಂಡಿಯಾಕ್ಕೆ ಆಯ್ಕೆಯಾಗದೇ ನಿರಾಸೆಯಲ್ಲಿದ್ದರಂತೆ. ಆ ಸಂದರ್ಭದಲ್ಲಿ ದ್ರಾವಿಡ್ ಬಳಿ ಅಳಲು ತೋಡಿಕೊಂಡಿದ್ದರಂತೆ.ಆಗ ದ್ರಾವಿಡ್ ರಣಜಿಯಲ್ಲಿ ನೀನು ಸಾಕಷ್ಟು ರನ್