ಮುಂಬೈ: ವಿಶ್ವಕಪ್ ಬಳಿಕ ಟೀಂ ಇಂಡಿಯಾ ಆಡುವ ಪ್ರತೀ ಟೂರ್ನಮೆಂಟ್ ಗೂ ಮುನ್ನ ಧೋನಿ ಕತೆ ಏನು ಎಂಬ ಪ್ರಶ್ನೆ ಬಂದೇ ಬರುತ್ತಿದೆ. ಇದೇ ಪ್ರಶ್ನೆ ನಿನ್ನೆ ಬಾಂಗ್ಲಾದೇಶದ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಆಯ್ಕೆ ಮಾಡಿದಾಗಲೂ ಬಂದಿದೆ. ಇದಕ್ಕೆ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.ನಾವು ಧೋನಿಯನ್ನು ಬಿಟ್ಟು ಮುಂದೆ ನಡೆದಿದ್ದೇವೆ. ರಿಷಬ್ ಪಂತ್ ಉತ್ತಮವಾಗಿ ಆಡುತ್ತಿದ್ದಾರೆ. ಪ್ರತಿಭಾವಂತ ಸಂಜು ಸ್ಯಾಮ್ಸನ್ ರನ್ನೂ ತಂಡಕ್ಕೆ ಸೇರಿಸಿಕೊಂಡಿದ್ದೇವೆ.