ನವದೆಹಲಿ: ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ಧುಲ್ಲಾ ಮಾಡಿದ ಕಾಮೆಂಟ್ ಒಂದಕ್ಕೆ ಲೇವಡಿ ಮಾಡಿ ಟ್ವೀಟ್ ಮಾಡಿದ್ದರು. ಅದಕ್ಕೀಗ ಒಮರ್ ಅಬ್ಧುಲ್ಲಾ ತಿರುಗೇಟು ನೀಡಿದ್ದಾರೆ.ಜಮ್ಮು ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕು ಎಂದು ಒಮರ್ ಅಬ್ಧುಲ್ಲಾ ಕಾಮೆಂಟ್ ಮಾಡಿದ್ದಕ್ಕೆ ಪ್ರಧಾನಿ ಮೋದಿ ಕೂಡಾ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಕೂಡಾ ಟ್ವೀಟ್ ಮಾಡಿ ಒಮರ್ ಅಬ್ಧುಲ್ಲಾಗೆ ಬೇಕಿರುವುದು