ಕೋಲ್ಕೊತ್ತಾ: ಬಂಗಾಳದ ಹುಲಿ ಎಂದೇ ಕರೆಯಿಸಿಕೊಳ್ಳುತ್ತಿದ್ದ ಟೀಂ ಇಂಡಿಯಾ ಕ್ರಿಕೆಟ್ ನ ಎವರ್ ಗ್ರೀನ್ ಕ್ಯಾಪ್ಟನ್ ಸೌರವ್ ಗಂಗೂಲಿಗೆ ಇಂದು 48 ವರ್ಷ ಪೂರ್ತಿಯಾಗಿದೆ. ಹುಟ್ಟುಹಬ್ಬದ ಸಂದರ್ಭದಲ್ಲಿ ಗಂಗೂಲಿಗೆ ನಾನಾ ಕಡೆಯಿಂದ ಶುಭಾಷಯ ಹರಿದುಬರುತ್ತಿದೆ.ನಾಯಕನಾಗಿ ಗಂಗೂಲಿ ಭಾರತ ತಂಡಕ್ಕೆ ಅಮೂಲ್ಯ ಆಟಗಾರರನ್ನು ಕೊಡುಗೆಯಾಗಿ ನೀಡಿದ್ದರು. ಅವರ ನಾಯಕತ್ವದಲ್ಲಿ ಭಾರತ ತಂಡದಲ್ಲಿ ಯುವ, ಪ್ರತಿಭಾವಂತ ಆಟಗಾರರಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತಿತ್ತು.ಇದೇ ಕಾರಣಕ್ಕೆ ಭಾರತಕ್ಕೆ ವೀರೇಂದ್ರ ಸೆಹ್ವಾಗ್, ಹರ್ಭಜನ್ ಸಿಂಗ್, ಜಹೀರ್ ಖಾನ್,