ಕೊಚ್ಚಿ: ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಿದ ಕಳಂಕದಿಂದಾಗಿ ಟೀಂ ಇಂಡಿಯಾಕ್ಕೆ ಮರಳಿ ಬರಲು ಸಾಧ್ಯವಾಗದೇ ಹತಾಶೆಯಲ್ಲಿರುವ ವೇಗಿ ಶ್ರೀಶಾಂತ್ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದು ಶ್ರೀಶಾಂತ್ ನಿರ್ದೋಷಿ ಎಂದು ಸಾಬೀತಾದರೂ ಮರಳಿ ಕ್ರಿಕೆಟ್ ಆಡಲು ಬಿಸಿಸಿಐ ಒಪ್ಪಿಗೆ ಸಿಗುತ್ತಿಲ್ಲ. ಇದರಿಂದ ಕ್ರುದ್ಧರಾಗಿರುವ ಶ್ರೀಶಾಂತ್ ಟೀಂ ಇಂಡಿಯಾದಲ್ಲಿ ಸದ್ಯ ಆಡುತ್ತಿರುವ ಆಟಗಾರರೊಬ್ಬರೂ ಮ್ಯಾಚ್ ಫಿಕ್ಸಿಂಗ್ ನಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದಾರೆ.ಚೆನ್ನೈ ಮತ್ತು ರಾಜಸ್ಥಾನ