ಬೆಂಗಳೂರು: ಕೊರೋನಾದಿಂದ ತಾಯಿ ಮತ್ತು ಸಹೋದರಿಯನ್ನು ಒಂದೇ ವಾರದ ಅಂತರದಲ್ಲಿ ಕಳೆದುಕೊಂಡ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಭಾವುಕ ಸಂದೇಶ ಬರೆದಿದ್ದಾರೆ.ಕಡೂರಿನಲ್ಲಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದ ವೇದಾ ತಾಯಿ ತೀರಿಕೊಂಡ ಎರಡು ವಾರದ ಬಳಿಕ ಅವರ ಸಹೋದರಿಯೂ ಕೊನೆಯುಸಿರೆಳೆದಿದ್ದರು. ಈ ಎರಡು ಆಘಾತಗಳನ್ನು ಒಟ್ಟೊಟ್ಟಿಗೆ ಅನುಭವಿಸಿದ ವೇದಾ ಈಗ ಸಾಮಾಜಿಕ ಜಾಲತಾಣದಲ್ಲಿ ಭಾವುಕರಾಗಿ ಸಂದೇಶ ಬರೆದಿದ್ದಾರೆ.‘ಇಂತಹದ್ದೊಂದು ಘಟನೆ ಆಗುತ್ತದೆಂದು ಯಾರಿಗೂ ಕಲ್ಪನೆಯೇ ಇರಲಿಲ್ಲ. ನನ್ನ ಹೃದಯವೇ