ನವದೆಹಲಿ: ದೇಶದ ಯಾವುದೇ ವಿಚಾರಗಳ ಬಗ್ಗೆ ಟ್ವೀಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭ್ಯಾಸ. ಇದೀಗ ಹರ್ಯಾಣದಲ್ಲಿ ಬಿಜೆಪಿ ನಾಯಕ ಪುತ್ರನಿಂದ ಅನ್ಯಾಯಕ್ಕೊಳಗಾದ ಮಹಿಳೆ ಪರ ಅವರು ಧ್ವನಿಯೆತ್ತಿದ್ದಾರೆ.