ನವದೆಹಲಿ: ದೇಶದ ಯಾವುದೇ ವಿಚಾರಗಳ ಬಗ್ಗೆ ಟ್ವೀಟರ್ ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭ್ಯಾಸ. ಇದೀಗ ಹರ್ಯಾಣದಲ್ಲಿ ಬಿಜೆಪಿ ನಾಯಕ ಪುತ್ರನಿಂದ ಅನ್ಯಾಯಕ್ಕೊಳಗಾದ ಮಹಿಳೆ ಪರ ಅವರು ಧ್ವನಿಯೆತ್ತಿದ್ದಾರೆ. ಚಂಡೀಘಡದ ಹೆದ್ದಾರಿಯಲ್ಲಿ ಬಿಜೆಪಿ ಮುಖ್ಯಸ್ಥ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ ವರ್ಣಿಕಾ ಕುಂಡು ಎಂಬ ಯುವತಿಯ ಕಾರು ಹಿಂಬಾಲಿಸಿದ್ದಲ್ಲದೇ, ಅಪಹರಿಸಲು ಯತ್ನಿಸಿದ್ದ. ಈ ಘಟನೆ ದೇಶದಾದ್ಯಂತ ಸುದ್ದಿಯಾಗಿತ್ತು. ಪ್ರತಿಭಟನೆಗಳು ವ್ಯಕ್ತವಾದ ಮೇಲೆ