ಬೆಂಗಳೂರು (ಜು.13): ಲಾಕ್ಡೌನ್ ಸಡಿಲಿಕೆ ಬಳಿಕ ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಿಗೆ ಅಂತರ್ ರಾಜ್ಯ ಬಸ್ ಸೇವೆ ಪುನರಾರಂಭಿಸಿದ್ದ ಕೆಎಸ್ಆರ್ಟಿಸಿ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳಕ್ಕೆ ಬಸ್ ಸೇವೆ ಪುನರಾರಂಭಿಸಿದೆ.