ಬೆಂಗಳೂರು (ಜು.13): ಲಾಕ್ಡೌನ್ ಸಡಿಲಿಕೆ ಬಳಿಕ ಆಂಧ್ರಪ್ರದೇಶ, ತೆಲಂಗಾಣ, ಗೋವಾ ರಾಜ್ಯಗಳಿಗೆ ಅಂತರ್ ರಾಜ್ಯ ಬಸ್ ಸೇವೆ ಪುನರಾರಂಭಿಸಿದ್ದ ಕೆಎಸ್ಆರ್ಟಿಸಿ ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರದಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳಕ್ಕೆ ಬಸ್ ಸೇವೆ ಪುನರಾರಂಭಿಸಿದೆ. ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಬೆಂಗಳೂರು, ಮೈಸೂರು, ಪುತ್ತೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಕೇರಳದ ವಿವಿಧ ಸ್ಥಳಗಳಿಗೆ ಬಸ್ ಕಾರ್ಯಾಚರಣೆ ಮಾಡಿದೆ. ಬಸ್ಸುಗಳಲ್ಲಿ ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ 72 ಗಂಟೆಯೊಳಗೆ