ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯಲ್ಲಿ ಹಿಂದೆಂದೂ ಕಂಡರಿಯದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹಲವು ಮನೆಗಳು ನೀರುಪಾಲಾಗಿವೆ. ಕಷ್ಟಪಟ್ಟು ದುಡಿದು ಸಂಗ್ರಹಿಸಿದ ಬೇಳೆ ಕಾಳುಗಳು ನೀರು ಪಾಲಾದರೇ, ಮನೆಯಲ್ಲಿನ ಬಟ್ಟೆಬರೆಗಳನ್ನ ಕಳೆದುಕೊಂಡ ನಾಗರಿಕರು ತಮ್ಮ ಜೀವವನ್ನ ರಕ್ಷಿಸಿಕೊಳ್ಳಲು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದಾರೆ.