ನವದೆಹಲಿ (ಜು.17): ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ದೊರೆತರೂ ಆದೇಶದ ಪ್ರತಿಯು ಜೈಲಧಿಕಾರಿಗಳಿಗೆ ಸಿಗುವುದು ತಡವಾಗುವ ಕಾರಣ ಬಿಡುಗಡೆ ವಿಳಂಬವಾಗುವುದನ್ನು ತಪ್ಪಿಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ.