ಮುಂಬೈ(ಜು.19): ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೆ ಭಾರೀ ವರ್ಷಧಾರೆ ಆಗಿದ್ದು, ಇಡೀ ರಾತ್ರಿ ಸುರಿದ ಮಳೆಯಿಂದ ಹಲವೆಡೆ ಭೂಕುಸಿತ ಸಂಭವಿಸಿ ಒಟ್ಟು 30 ಜನರು ಸಾವನ್ನಪ್ಪಿದ್ದಾರೆ. ಭೂಕುಸಿತವು ಹಲವು ಮನೆಗಳನ್ನು ಆಪೋಶನ ತೆಗೆದುಕೊಂಡಿದ್ದು, ಇದರಿಂದಾಗಿ ಸಾವು-ನೋವು ಉಂಟಾಗಿವೆ. ದಿಢೀರ್ ಪ್ರವಾಹದ ಸ್ಥಿತಿ ಸೃಷ್ಟಿಆದ ಕಾರಣ ಮುಂಬೈನಲ್ಲಿನ ಉಪನಗರ ರೈಲು ಸಂಚಾರ ನಿಲ್ಲಿಸಲಾಗಿದೆ ಹಾಗೂ ದೂರದ ಊರಿನ ರೈಲುಗಳ ಸಂಚಾರ ಕಡಿತಗೊಳಿಸಲಾಗಿದೆ. ರಸ್ತೆ ಸಂಚಾರ ಕೂಡ ಸ್ಥಗಿತಗೊಂಡಿದೆ.