ಶಿಮ್ಲಾ(ಜು.18): ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗಿದೆಯಾದರೂ ಮೂರನೇ ಅಲೆ ಭೀತಿ ಕಾಡುತ್ತಿದೆ. ಹೀಗಾಗಿ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಪ್ರವಾಸಿ ಪ್ರದೇಶಗಳು ಮತ್ತು ಮಾರುಕಟ್ಟೆಗಳಲ್ಲಿ ಜನಸಂದಣಿತಾಗದಂತೆ ನಿಗಾ ವಹಿಸಿ ಹಾಗೂ ಕೋವಿಡ್ -19 ಗೆ ಸಂಬಂಧಿಸಿದ ಮಾರ್ಗಸೂಚಿ ಪಾಲಿಸಿ ಎಂದು ಕೇಂದ್ರ ಸರ್ಕಾರ ನಿರಂತರವಾಗಿ ಜನರಿಗೆ ಮನವಿ ಮಾಡುತ್ತಿದೆ.